ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಮಗನ ಕಾರು ಡಿಕ್ಕಿ ರೈತ ಸಾವು

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ಕಾರು ಡಿಕ್ಕಿ ಆಗಿ ರೈತ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಸ್ನೇಹಿತರೊಂದಿಗೆ ತೆರಳಿ ವಾಪಸ್ಸಾಗ್ತಿದ್ದ ವೇಳೆ ಎಂಜಿ ಗ್ಲೊಸ್ಟರ್ ಕಾರು ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ರೈತ 56 ವರ್ಷದ ಕೂಡ್ಲೆಪ್ಪ ಬೋಳಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ರೈತ ಬದುಕುಳಿಯಲಿಲ್ಲ.

Leave a Reply

Your email address will not be published. Required fields are marked *