ಬಾಲಕನ ಸಾವಿನಿಂದ ನೊಂದ ಚಾಲಕ ಆತ್ಮಹತ್ಯೆ; ನಡೆದಿದ್ದೇನು?

ಚಾಮರಾಜನಗರ: ಟ್ರ್ಯಾಕ್ಟರ್​​ಗೆ ಸಿಲುಕಿ ಬಾಲಕ  ಮೃತಪಟ್ಟಿದ್ದರಿಂದ ನೊಂದ ಚಾಲಕ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಸವಕನಹಳ್ಳಿಪಾಳ್ಯದಲ್ಲಿ ನಡೆದಿದೆ.

ಸವಕನಹಳ್ಳಿಪಾಳ್ಯ ಗ್ರಾಮದ ಹರ್ಷ(5) ಎಂಬ ಬಾಲಕ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಪಿಹೆಚ್​ಡಿ ಸಂಶೋಧನೆ ಕೈಗೊಂಡಿದ್ದ ಸುನೀಲ್(23) ಮೃತ ದುರ್ದೈವಿಗಳು.

ಗ್ರಾಮದಲ್ಲಿ ಜಮೀನನ್ನು ಕ್ರಿಕೆಟ್ ಪಂದ್ಯಾವಳಿ ನಡೆಸುವ ಸಲುವಾಗಿ  ಟ್ರ್ಯಾಕ್ಟರ್ ನಿಂದ ಸಮತಟ್ಟು ಮಾಡಲಾಗುತ್ತಿತ್ತು. ಸುನೀಲ್ ಟ್ರ್ಯಾಕ್ಟರ್ ಓಡಿಸುತ್ತಿದ್ದು, ಅದನ್ನು ಬಾಲಕ ಹರ್ಷ ನೋಡುತ್ತಾ ನಿಂತಿದ್ದನು. ಈ ವೇಳೆ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಬಾಲಕ ಹರ್ಷನಿಗೆ ಗುದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರಿಂದ ತಕ್ಷಣವೇ. ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸ ಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಹರ್ಷ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಸ್ಥಳದಿಂದ ಪರಾರಿಯಾದ ಸುನೀಲ್​ ಮೈಸೂರಿಗೆ ತೆರಳಿದ್ದಾನೆ. ಅಷ್ಟರಲ್ಲೇ ಆತನಿಗೆ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ ವಿಚಾರ ತಿಳಿದಿದೆ, ಇದರಿಂದ ಮನನೊಂದ ಆತ ತಾನು ಉಳಿದುಕೊಂಡಿದ್ದ ರೂಮಿನಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *