ಕೊನೆಗಳಿಗೆವರೆಗೂ ಕೆಲಸ ಮಾಡ್ತೀನಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜೀನಾಮೆ ನೀಡುವಂತೆ ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಮಾತನಾಡಿದ ಅವರು, ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಸಂದೇಶ ಬರಬಹುದು. ನಾಳೆ ಬೆಳಗ್ಗೆವರೆಗೆ ಕಾದು ನೋಡೋಣ ಎಂದಿದ್ದಾರೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಕೊನೆ ಗಳಿಗೆವರೆಗೂ ನಾನು ಕೆಲಸ ಮಾಡುತ್ತೇನೆ. ಇನ್ನು ಹತ್ತು ಹದಿನೈದು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಕಾವೇರಿ ನಿವಾಸ ಬಳಿ ಹೇಳಿದ್ದಾರೆ.ಆದ್ರೆ, ಮಧ್ಯಾಹ್ನದ ಬಳಿಕ ಏನ್ ಆಗುತ್ತೋ ಎಂದು ಹೇಳುವ ಮೂಲಕ ಯಡಿಯೂರಪ್ಪ ಅಚ್ಚರಿ ಮೂಡಿಸಿದ್ದಾರೆ.

Leave a Reply

Your email address will not be published. Required fields are marked *