ಮೈಸೂರು,ಜುಲೈ 31:- ಸಿಂಡಿಕೇಟ್ನ ಕುಲಪತಿಗಳಿಗೆ ದತ್ತವಾದ ಅಧಿಕಾರಕ್ಕೆ ಅನುಗುಣವಾಗಿ ಮತ್ತು ಪರೀಕ್ಷಾ ಮಂಡಳಿಯ ಶಿಫಾರಸಿನ ಮೇರೆಗೆ ಜೆ.ರಾಜೇಂದ್ರ ಅವರು ಡಾ.ಶ್ರೀಕಂಠ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಭಾರತೀಯ ಅಧ್ಯಯನ ವಿಷಯದಲ್ಲಿ “ಗಾಂಧೀಜಿ ಅವರ ಚಿಂತನೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಆಡಳಿತ ವಿಕೇಂದ್ರಿಕರಣ (ಚಾಮರಾಜನಗರ ಜಿಲ್ಲೆಯನ್ನು ಅನುಲಕ್ಷಿಸಿ)” ಎಂಬ ಮಹಾ ಪ್ರಬಂಧವನ್ನು ಪಿಎಚ್ಡಿ ಪದವಿಗಾಗಿ ಅಂಗೀಕರಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.