ಮಡಿಕೇರಿ: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್, (ಮಡಿಕೇರಿ ಘಟಕ). ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಸಂಯಕ್ತಾಶ್ರಯದಲ್ಲಿ ಆ. 14 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ತಾಲ್ಲೂಕ್ಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ 2021-22 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ.
30 ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳ ಹಗ್ಗ ಜಗ್ಗಾಟ ಪುರುಷರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಮಹಿಳೆಯರ ಬಾಲಕರಿಗೆ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕರಿಗೆ(9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕಿಯರಿಗೆ (9 ಜನರ ತಂಡ). ಕಿರಿಯರ ಪ್ರಾಥಮಿಕ ಶಾಲಾ ಬಾಲಕರಿಗೆ 50 ಮೀ ಓಟ, ಕಿರಿಯರ ಪ್ರಾಥಮಿಕ ಶಾಲಾ ಬಾಲಕಿಯರಿಗೆ 50 ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕರಿಗೆ 100 ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕಿಯರಿಗೆ 100 ಮೀ ಓಟ, ಪ್ರೌಢಶಾಲಾ ಬಾಲಕರಿಗೆ 200 ಮೀ ಓಟ, ಪದವಿ ಪೂರ್ವ ಕಾಲೇಜು ಬಾಲಕರಿಗೆ 300 ಮೀ ಓಟ, ಪದವಿ ಪೂರ್ವ ಕಾಲೇಜು ಬಾಲಕಿಯರಿಗೆ 300 ಮೀ ಓಟ, 40ವರ್ಷ ಮೇಲ್ಟಟ್ಟವರಿಗೆ ಪುರುಷರಿಗೆ 300 ಮೀ ಓಟ, 40 ವರ್ಷ ಮೇಲ್ಟಟ್ಟವರಿಗೆ ಮಹಿಳೆಯರಿಗೆ 300 ಮೀ ಓಟ, ಸಾರ್ವಜನಿಕ ಪುರುಷರ ಮುಕ್ತ ಓಟ, ಸಾರ್ವಜನಿಕ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ, ನಂತರ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ.
ಕ್ರೀಡಾಕೂಟ ಮತ್ತು ಆಟೋಟ ಸ್ಪರ್ದೆ ಬೆಳಗ್ಗೆ 9 ಗಂಟೆಗೆ ಉದ್ಘಾಟನೆಯ ನಂತರ ಆರಂಭವಾಗಲಿದ್ದು, ಕ್ರೀಡಾಳುಗಳು, ಅಭಿಮಾನಿಗಳು ಶಿಸ್ತುಬದ್ಧ ಸ್ವಚ್ಛ ವಾತಾವರಣವನ್ನು ಕಾಪಾಡುವಲ್ಲಿ ಸಹಕರಿಸಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಈ ಬಾರಿಯ ಕ್ರೀಡಾಕೂಟವನ್ನು ಸರಳವಾಗಿ ಹಾಗೂ ಕೋವಿಡ್19 ಸರ್ಕಾರದ ನಿಯಮದ ಅನುಸಾರ ನಡೆಸಲಾಗುವುದು. ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಹೆಚ್ಚಿನ ಮಾಹಿತಿಗೆ ನವೀನ್ ದೇರಳ, ಅಧ್ಯಕ್ಷರು, ತಾಲೂಕ್ಕು ಯುವ ಒಕ್ಕೂಟ ಮಡಿಕೇರಿ- 9740404520, ಬಾಲಾಡಿ ದಿಲೀಪ್ ಕುಮಾರ್, ಕಾರ್ಯದರ್ಶಿ, ತಾಲೂಕು ಯುವ ಒಕ್ಕೂಟ ಮಡಿಕೇರಿ-9480674546, ಪಿ.ಪಿ.ಸುಕುಮಾರ್ ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ 9481213920. ಕೆ.ಕೆ.ಗಣೇಶ್, ಕಾರ್ಯದರ್ಶಿ, ಕೊಡಗು ಜಿಲ್ಲಾ ಯುವ ಒಕ್ಕೂಟ- 9449759029 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.