ಮೀಸಲಾತಿ ವಿಚಾರ ಬಂದಾಗಲೆಲ್ಲ ಸಂವಿಧಾನ ಬದಲಾಯಿಸಬೇಕು ಅಂತ ಹುನ್ನಾರ ಮಾಡಿದ್ರು: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

ಬಿಜೆಪಿ ಯಾವತ್ತೂ ಹಿಂದುಳಿದ ವರ್ಗಗಳ ಪರವಾಗಿಲ್ಲ. ಎಲ್ಲಾ ಹಂತದಲ್ಲೂ ರಿಸರ್ವೇಶನ್ ಗೆ ವಿರೋಧ ಮಾಡುತ್ತಲೇ ಬಂದಿದೆ. ಮೀಸಲಾತಿ ಪರವಾಗಿದ್ದರೆ ಸಂವಿಧಾನ ಬದಲಾಗಬೇಕು ಅಂತಿರಲಿಲ್ಲ ಅಂತ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರ ಬಂದಾಗಲೆಲ್ಲ ಸಂವಿಧಾನ ಬದಲಾಯಿಸಬೇಕು ಅಂತ ಹುನ್ನಾರ ಮಾಡಿದ್ರು. ಈಗ ಮುಂದುವರೆದ ಜಾತಿಗಳು ಕೂಡ ಬಡವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇದಾದ ಬಳಿಕ ಆರೆಸ್ಸೆಸ್ ಅಜೆಂಡಾ ಬದಲಾಗಿದೆ. ಈಗ ಅವರು ಮೀಸಲಾತಿ ಬಗ್ಗೆ ಮಾತನಾಡುತ್ತಿಲ್ಲ. ಜಾತಿಗಣತಿ ಮಾಡಿದ್ರೆ ಜಾತಿ-ಜಾತಿಗಳ ನಿಖರ ಸಂಖ್ಯೆ ಗೊತ್ತಾಗುತ್ತೆ. ಆಗ ಸಮಾಜದಲ್ಲಿ ಬಡತನದಲ್ಲಿರುವವರಿಗೆ ವಿಶೇಷ ಯೋಜನೆ ಕೊಡಬಹುದು. ಅವರಿಗೆ ವಿಶೇಷ ಅವಕಾಶ ನೀಡಬಹುದು. ಕರ್ನಾಟಕದಲ್ಲಿ ಜಾತಿಗಣತಿ ಆಗಬೇಕು ಅಂತ ಒತ್ತಾಯಿಸಿದ್ದಾರೆ.

ಸರ್ಕಾರ ಜಾತಿಗಣತಿ ಮಾಡಿಸಬೇಕು. ಆ ವೇಳೆ ಯಾರು ಸಮಾಜದಲ್ಲಿ ಬಡತನದಲ್ಲಿ ಇದ್ದಾರೆ ಅಂತ ಗೊತ್ತಾಗಲಿದೆ. ಆ ವೇಳೆ ವಿಶೇಷವಾಗಿ ಜನರಿಗೆ ಮೀಸಲಾತಿ ನೀಡೋಕೆ ಅನುಕೂಲ ಆಗುತ್ತೆ. ಇದು ಸಮಾಜದಲ್ಲಿ ಒಂದು ದಾಖಲೆಯಾಗಿ ಉಳಿಯುತ್ತದೆ ಅಂತ  ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ಪರ ಇಲ್ಲ. ಮೀಸಲಾತಿ ವಿಚಾರ ಬಂದಾಗೆಲ್ಲ ಆರ್ಎಸ್ಎಸ್ ನವರು ಅದನ್ನು ನಿಲ್ಲಿಸಬೇಕು ಅಂತ ಮುಂದಾಗಿದ್ರು. ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಬಿಜೆಪಿ ಬಣದ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಕೂಡ ಶೇಕಡಾ 10ರಷ್ಟು ಮೀಸಲಾತಿ ನೀಡಿದೆ. ಇದು ನನ್ನ ಪ್ರಕಾರ ಸಂವಿಧಾನಬಾಹಿರ. ಸಂವಿಧಾನದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಂತ ಹೇಳಿದೆ.ಎಲ್ಲಿಯೂ ಆರ್ಥಿಕವಾಗಿ ಹಿಂದುಳಿದವರಿಗೆ ಅಂತ ಹೇಳಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *