ಚಿನ್ನದ ಅಂಬಾರಿ ಹೊರಲು ಅಭಿಮನ್ಯು ವಿಕ್ರಂ,ಕಾವೇರಿ, ಮತ್ತು ವಿಜಯ ಕರೋನ ನೆಗೆಟಿವ್ ವರದಿ ಕಡ್ಡಾಯ

ಇಡೀ ಪ್ರಪಂಚಕ್ಕೆ ಕೊರೋನಾ ಮಹಾಮಾರಿ ಕರಿನೆರಳು ಆವರಿಸಿದ್ದು, ಈ ಬಾರಿಯೂ ಕೂಡ ಮೈಸೂರು ದಸರಾಗೆ ಮಹಾಮಾರಿ ವೈರಸ್ ನ ಎಫೆಕ್ಟ್ ತಟ್ಟಿದೆ.

ಈ ವರ್ಷವೂ ಕೂಡ ನಾಡಹಬ್ಬ ಮೈಸೂರು ದಸರಾ ಹಬ್ಬವನ್ನು ಸರಳವಾಗಿ ಆಚರಿಸುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.ಇನ್ನು ಕೊರೋನಾದ ಎರಡನೇ ಅಲೆಗೆ ರಾಜ್ಯ ತತ್ತರಿಸಿಹೋಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯೂ ಕೂಡ  ಜಂಬೂಸವಾರಿಯಲ್ಲಿ ಭಾಗವಹಿಸಲು ಅನುಮತಿ ಪಡೆದ ಆನೆಗಳಿಗೆ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಆದರೆ ಜಂಬೂಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ದೊರೆಯಲಿದೆ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಏಕೆಂದರೆ ಈ ಬಾರಿ ಕೇವಲ ಮಾವುತರು ಕಾವಾಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಸಾಕು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯ ಗೊಳಿಸಲಾಗಿದೆ. ಕಳೆದ ವರ್ಷ ಗಜಪಯಣದ ನಂತರ ಆನೆಗಳನ್ನು ಮೈಸೂರಿಗೆ ಕರೆತಂದಾಗ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮತ್ತು ಹದಿಮೂರು ಹದಿನಾಲ್ಕು ಆನೆಗಳ ಬದಲಾಗಿ ಕೇವಲ ಐದು ಆನೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಹೀಗಾಗಿ ಚಿನ್ನದ ಅಂಬಾರಿ ಹೊರಲು ಅಭಿಮನ್ಯು ಜೊತೆಗೆ ವಿಕ್ರಂ,ಕಾವೇರಿ, ಮತ್ತು ವಿಜಯ ಸೇರಿದಂತೆ ಮೂರು ಗಂಡು ಮತ್ತು ಎರಡು ಹೆಣ್ಣು ಆನೆಗಳು ದಸರಾದಲ್ಲಿ ಭಾಗವಹಿಸಿದ್ದವು.

ಇನ್ನು ಈ ವರ್ಷ ಅರಣ್ಯ ಇಲಾಖೆ, ಪಶುವೈದ್ಯರು, ಗೂಗಲ್ ಮತ್ತು ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಆನೆ ಶಿಬಿರಗಳಿಗೆ ತೆರಳಿ ಕೋವಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ. “ಪಶು ವೈದ್ಯರ ತಂಡವು ಮೈಸೂರು ಮತ್ತು ಕೊಡಗು ಅನಿಸಿದರೆ ಬಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತದೆ. ಒಂದು ವೇಳೆ  ಅವುಗಳ ವೈದ್ಯಕೀಯ ವರದಿ ಸಾಮಾನ್ಯವಾಗಿದ್ದರೆ ಹಾಗೂ ಅವುಗಳ ಪರೀಕ್ಷಾ ವರದಿ ನೆಗೆಟಿವ್ ಬಂದನಂತರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ಅಂತಿಮ ಪಟ್ಟಿಯನ್ನು ತಯಾರಿಸುವುದಾಗಿ ಹಿರಿಯ ಅರಣ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *