ಮೈಸೂರು,ಸೆ.7:- ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಹಾರ್ಡಿಂಜ್ ಸರ್ಕಲ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಎರಡು ಕಾರುಗಳ ಮಾಲೀಕರು ಕಾರುಗಳನ್ನು ಸ್ಥಳದಲ್ಲಿಯೇ ಬಿಟ್ಟು ತೆರಳಿದ್ದು, ದೇವರಾಜ ಸಂಚಾರಿ ಠಾಣೆಯ ಪೊಲೀಸರು ಕಾರನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದು ನಿಲ್ಲಿಸಿದ್ದಾರೆ.
ಬನ್ನೂರು ರಸ್ತೆಯಿಂದ ಅತಿವೇಗದಲ್ಲಿ ಬರುತ್ತಿದ್ದ ಕಾರು ಮತ್ತು ಮೈಸೂರು-ಬೆಂಗಳೂರು ರಸ್ತೆಯಿಂದ ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಮದ್ಯದ ನಶೆಯಲ್ಲಿದ್ದಂತೆ ಕಾಣಿಸುತ್ತಿದ್ದರೆಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಯಾರಿಗೆ ಸೇರಿದ್ದು ಎಂಬುದನ್ನು ಇದೀಗ ಪೊಲೀಸರು ಪತ್ತೆ ಹಚ್ಚಬೇಕಿದ್ದು, ಮುಂದಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.