ರೈತರ ಬೆಳೆ ಸಮೀಕ್ಷೆಗಾಗಿ ಆ್ಯಪ್ ಬಿಡುಗಡೆ

ಮೈಸೂರು:  ಕೃಷಿ ಇಲಾಖೆಯ ವತಿಯಿಂದ 2021-22ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಬೆಳೆಸಮೀಕ್ಷೆ ಕಾರ್ಯಕೈಗೊಳ್ಳಲು ರೈತರ ಬೆಳೆ ಸಮೀಕ್ಷೆ ಆ್ಯಪ್ ಅನ್ನು ಬಿಡುಗಡೆ ಮಾಡಿದೆ.

ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆದಿರುವ ರೈತರು ತಮ್ಮಲ್ಲಿರುವ ಸ್ಮಾರ್ಟ್  ಫೋನ್‍ನಲ್ಲಿ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಂಡು ತಾವು ಬೆಳೆದಿರುವ ಮಾಹಿತಿಯನ್ನು ಅಪ್ ಲೋಡ್ ಮಾಡಬೇಕು. ರೈತರ ಬೆಳೆ ಸಮೀಕ್ಷೆಗಾಗಿ ಸಿದ್ದಪಡಿಸಿರುವ ಆ್ಯಪ್ ನಿಂದ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬಹುದು. ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ವಿವಿಧ ಸವಲತ್ತುಗಳನ್ನು ಒದಗಿಸಲು ಮತ್ತು RTCಯಲ್ಲಿ ಅಳವಡಿಸಲು ಬಳಸಲಾಗುತ್ತದೆ.

ರೈತರು ಪೂರ್ವ ಮುಂಗಾರು ಬೆಳೆ ಸಮೀಕ್ಷೆ 2021-22 ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಲು ಸಾರ್ವಜನಿಕರು ಗೂಗಲ್ ಪ್ಲೆ ಸ್ಟೋರ್ ನಲ್ಲಿ Early kharif farmer crop survey 2021-22ಎಂದು ಟೈಪ್ ಮಾಡಬೇಕು ಅಥವಾ https://play.Google.com/store/apps/details?fid=com.csk.khariffarmer2021.cropsurvey  ಲಿಂಕ್ ಅನ್ನು ಬಳಸಬೇಕು. ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಅಪ್ ಲೋಡ್ ಮಾಡದಿದ್ದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಂದ ದೊರೆಯುವ ಸವಲತ್ತುಗಳನ್ನು ಪಡೆಯುವುದರಿಂದ ವಂಚಿತರಾಗುವ ಸಂಭವವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಲಾಗಿರುವ ಖಾಸಗಿ ನಿವಾಸಿಗಳನ್ನು ಅಥವಾ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 8448447715 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *