
ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.1ರ ಶುಕ್ರವಾರ ಬೆಳಗ್ಗೆ ಮಾವುತರು ಹಾಗೂ ಕಾವಾಡಿಗರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸಿದರು.
ಕಾವಾಡಿಗರು ಹಾಗೂ ಮಾವುತರಿಗೆ ಸ್ವತಃ ಸಚಿವರೇ ಉಪಹಾರ ಬಡಿಸಿದರು. ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿ ಅವರ ಯೋಗಕ್ಷೇಮ ವಿಚಾರಿಸಿದರು.