ಪಕ್ಷ ಸಂಘಟನೆ ದೃಷ್ಠಿಯಿಂದ ರಾಜೀನಾಮೆ:ಡಿವಿಎಸ್

ಮೈಸೂರು: ಮುಂದಿನ ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯನ್ನು ದೃಷ್ಠಿಯಲ್ಲಿರಿಸಿಕೊಂಡು ಪಕ್ಷ ಸಂಘಟನೆ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪ್ರಥಮ ಬಾರಿಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ನನಗೆ ಎಲ್ಲ ರೀತಿಯ ಸ್ಥಾನಮಾನಗಳನ್ನು ನೀಡಿದ್ದು, ಈ ಅವಕಾಶ ಬೇರೆ ಯಾರಿಗೂ ದೊರೆತಿಲ್ಲ ಆ ಸಂತೋಷ ನನಗಿದೆ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಹೇಳಿದ್ದು, ಅದರಂತೆ ನೀಡಿದ್ದೇನೆ ಅಷ್ಟೆ. ಇವತ್ತು ದೇಶದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಕೆಲವೇ ರಾಜ್ಯದಲ್ಲಿದ್ದ ಬಿಜೆಪಿ ಈಗ ಹದಿಮೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕವಾಗಿ ಬೆಳೆದಿದ್ದಾರೆ. ಇನ್ನು ರಾಜೀನಾಮೆ ವಿಚಾರವಾಗಿ ವಿರೋಧ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ  ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಸಮುದ್ರ ವಿದ್ದಂತೆ. ನಾನು ವಿಮಾನ ನಿಲ್ದಾಣಕ್ಕೆ ಬಂದಾಗ ಸ್ವಾಗತಿಸಲು ನಾಲ್ಕು ಸಾವಿರ ಜನರು ಬಂದಿದ್ದರು. ಇದಕ್ಕಿಂತ ದೊಡ್ಡ ಸಂಪಾದನೆ ಬೇರೇನು ಬೇಕಾಗಿಲ್ಲ  ಎಂದರು.

ಬಿಜೆಪಿ ರಾಜ್ಯದಲ್ಲಿ ಭದ್ರವಾಗಿ  ಬೆಳೆಯಬೇಕಾದರೆ ಇತರ ಪಕ್ಷದಿಂದ ಬಂದವರು ಸಿದ್ಧಾಂತವನ್ನು ಒಪ್ಪಿಕೊಳ್ಳಬೇಕು. ಜತೆಗೆ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವೂ ಆಗಬೇಕು ಎಂದು ಹೇಳಿದರಲ್ಲದೆ, ನಮ್ಮನ್ನು ಟೀಕಿಸುವವರಿಗೆ. ನಾವು ಕೆಲಸಗಳ ಮೂಲಕವೇ ಉತ್ತರ ನೀಡಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *