ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ಹಿನ್ನೆಲೆ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆಯೋಜನೆ
ಸಭೆಯಲ್ಲಿ ದಸರಾ ಆಚರಣೆ ಸಂಬಂಧ ಚರ್ಚೆ

ವಿಶ್ವವಿಖ್ಯಾತ ಮೈಸೂರು ದಸರಾ 2021ರ ಆಚರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಸೆಪ್ಟೆಂಬರ್ 3ರಂದು ಉನ್ನತ ಮಟ್ಟದ ಸಭೆಯನ್ನು ಆಯೋಜಿಸಲಾಗಿದೆ. ಅಂದು ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪ್ರಸಕ್ತ ಸಾಲಿನ ದಸರಾ ಮಹೋತ್ಸವದ ಆಚರಣೆ ಬಗ್ಗೆ ಪೂರ್ವಭಾವಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.
ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ, ಕಳೆದ ವರ್ಷದಂತೆ ಈ ವರ್ಷವೂ ಕೂಡ ಸರಳ ಸಾಂಪ್ರದಾಯಿಕ ನಡೆಸುವ ಸಾಧ್ಯತೆ ಇದ್ದು, ಈ ಬಾರಿಯ ದಸರಾ ಆಚರಣೆ ಹೇಗೆ ನಡೆಯಲಿದೆ ಎಂಬುದರ ಬಗ್ಗೆ ಅಂದು ಚರ್ಚೆ ನಡೆಯಲಿದೆ ಎನ್ನಲಾಗಿದೆ.