4 ಜನರು, 30ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿದ್ದ ಹುಲಿ
ಮೈಸೂರು: ಇಲ್ಲಿನ ಮೈಸೂರು ಮೃಗಾಲಯ ವ್ಯಾಪ್ತಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ನೀಲಗಿರಿ ಜಿಲ್ಲೆಯ ‘ಎಂಡಿಟಿ-23’ ಎಂಬ ಹುಲಿ ಸಂಪೂರ್ಣ ಚೇತರಿಕೆ ಕಂಡಿರುವುದು ಅರಣ್ಯಾಧಿಕಾರಿಗಳಲ್ಲಿ ಹರ್ಷ ಮೂಡಿಸಿದೆ.

20 ದಿನಗಳಲ್ಲಿ 4 ಜನರು ಹಾಗೂ ೩೦ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿದ್ದ ಹುಲಿಯನ್ನು 21ನೇ ದಿನದ ಕಾರ್ಯಾಚರಣೆಯಲ್ಲಿ (ಅ.16) ಸೆರೆಹಿಡಿದು, ಮೈಸೂರಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಹುಲಿ ಚೇತರಿಕೆಯಾಗಿದ್ದು, ನಿಗದಿತ ಪ್ರಮಾಣದಲ್ಲಿ ಮಾಂಸ ಸೇವನೆ ಮಾಡುತ್ತಿದೆ ಎಂದು ಅರಣ್ಯ ವೈದ್ಯಾಧಿಕಾರಿ ಡಾ.ವಸೀಂ ಮೊಹಮ್ಮದ್ ತಿಳಿಸಿದರು.
ಏನಿದು ಘಟನೆ?
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹುಲಿಯ ಕಾಟ ಕಾಟ ಮಿತಿಮೀರಿತ್ತು. ೨೧ ದಿಮನಗಳಲ್ಲಿ ನಾಲ್ವರು ವ್ಯಕ್ತಿಗಳನ್ನು ಹುಲಿ ಕೊಂದುಹಾಕಿತ್ತು. ಮೇಕೆ ಸೇರಿದಂತೆ ೩೦ ಜಾನುವಾರುಗಳನ್ನು ತಿಂದು ಹಾಕಿತ್ತು. ಇದರಿಂದಾಗಿ ತಮಿಳುನಾಡಿನ ಪ್ರಧಾನ ಮುಖ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ವಾರ್ಡನ್ ಈ ನರಭಕ್ಷಕ ಹುಲಿಯನ್ನು ಬೇಟೆಯಾಡಿ ಕೊಲ್ಲಲು ಆದೇಶ ಹೊರಡಿಸಿದ್ದರು. ಆದರೂ, ಅರಣ್ಯ ಇಲಾಖೆಯ ಅಧಿಕಾರಿಗಳು ಸಂಯಮದಿಂದ ಹುಲಿ ಸೆರೆಗೆ ಆದ್ಯತೆ ನೀಡಿ ಕಾರ್ಯಾಚರಣೆ ನಡೆಸಿದ್ದರು. ಹುಲಿಯನ್ನು ಕೊಲ್ಲಲು 10 ಮಂದಿಯ ತಂಡ ನೀಲಗಿರಿ ಜಿಲ್ಲೆಯಲ್ಲಿ ಬೀಡು ಬಿಟ್ಟಿತ್ತು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಹಾಗಾಗಿ ಹುಲಿಯನ್ನು ಜೀವಂತವಾಗಿ ಸೆರೆ ಹಿಡಿಯಲು ನಿರ್ಧರಿಸಲಾಗಿತ್ತು.