ಕೆ.ಎಸ್.ಆರ್.ಟಿಸಿ ಸಿಬ್ಬಂದಿಗೆ “ಸಿಂಹ ಕ್ರಿಯಾ ಯೋಗ”

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಯು  ಕೋವಿಡ್ ಸಮಯದಲ್ಲಿ ಸಿಬ್ಬಂದಿಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ಶ್ವಾಸಕೋಶವನ್ನು ಕಾಪಾಡುವ “ಸಿಂಹ ಕ್ರಿಯಾ ಯೋಗ” ಕಾರ್ಯಕ್ರಮವನ್ನು  ಈಶಾ ಫೌಂಡೇಶನ್ ರವರ ಸಹಯೋಗದೊಂದಿಗೆ  ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾಧ ಶಿವಯೋಗಿ ಸಿ.ಕಳಸದ, ಕೆ ಎಸ್ ಆರ್ ಟಿ ಸಿ ರವರು ನಿಗಮದ ಸಿಬ್ಬಂದಿಗಳು ಶ್ರಮ ಜೀವಿಗಳು, ಹಗಲು ರಾತ್ರಿಯನ್ನದೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ.  ಆ ನಿಟ್ಟಿನಲ್ಲಿ , ಸಾವಿರಾರು ವರುಷಗಳ ಇತಿಹಾಸವನ್ನು ಹೊಂದಿರುವ ಯೋಗ ಕಾರ್ಯಕ್ರಮವು ದೈಹಿಕ, ಮಾನಸಿಕ ಹಾಗೂ ಭೌತಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈಶಾ ಫೌಂಡೇಶನ್ ರವರ ಸದರಿ ಯೋಗ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿ ಯಾಗಿದ್ದು, ಮನೆಯಲ್ಲಿಯೇ ಮಾಡಬಹುದಾದ ಸರಳ ಕ್ರಿಯೆ ಇದಾಗಿದೆ. ಕಾರ್ಯಕ್ರಮವು ಕನ್ನಡದಲ್ಲಿಯೇ ರೂಪಿಸಲಾಗಿದ್ದು, ಸಿಬ್ಬಂದಿಗಳಿಗೆ ಯಾವುದೇ ಪ್ರಶ್ನೆಗಳಿಗೂ ಕಾರ್ಯಕ್ರಮದ ಕೊನೆಯಲ್ಲಿ ಉತ್ತರಿಸಲಾಗುವುದು ಎಂದು ಹೇಳಿದರು.

ಜುಲೈ 1 ರಿಂದ ಬೆಳಗ್ಗೆ 7 ಗಂಟೆಗೆ ಹಾಗೂ ಸಂಜೆ 6. ಗಂಟೆಗೆ-  30 ನಿಮಿಷಗಳ ಅವಧಿ ,ಪ್ರತಿ ದಿನ  (ಒಂದು ವಾರಗಳ ಕಾಲ, ಶನಿವಾರ ಮತ್ತು ಭಾನುವಾರವೂ ಸೇರಿದಂತೆ ) ನಡೆಯಲಿದೆ.  ಕೋವಿಡ್ ನಿಂದಾಗಿ ಜನರ ಜೀವನಶೈಲಿ ಬದಲಾವಣೆಯಾಗಬೇಕಾಗಿರುವುದು ಅನಿವಾರ್ಯವಾಗಿದೆ. ಅದರಲ್ಲಿಯೂ ಯೋಗ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ.  ಈಶಾ ಫೌಂಡೇಶನ್ ರವರು ನಮ್ಮ ಸಿಬ್ಬಂದಿಗಳಿಗಾಗಿ ಸಿದ್ಧಪಡಿಸಿರುವ ಈ ಯೋಗ ಕಾರ್ಯಕ್ರಮವು ಸಿಬ್ಬಂದಿಗಳ ಆರೋಗ್ಯ ಸ್ನೇಹಿ ಉಪಕ್ರಮವಾಗಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಈಶಾ ಫೌಂಡೇಶನ್ ನ ರಾಧಿಕ ಶ್ರೀನಾಥ್, ನಿಗಮದ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *