ಕುಶಾಲನಗರ: ಕುಶಾಲನಗರ ತಾಲೋಕು ಆಡಳಿತ ವತಿಯಿಂದ ಪ್ರಥಮ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ತಹಶೀಲ್ದಾರ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಲವು ಇಲಾಖೆಗಳಿಂದ ಆಯ್ದ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಯಿತು.
ಮತ್ತೊಂದೆಡೆ ಕುಶಾಲನಗರ ತಾಲೋಕು ಆಡಳಿತ ಸ್ಥಳೀಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೆ ಅವಮಾನಿಸಿದೆ ಎಂದು ಕೆಲವು ಜನಪ್ರತಿನಿಧಿಗಳು ಆರೋಪಿಸಿದ್ದಾರೆ ಪೂರ್ವಭಾವಿ ಸಭೆಗೂ ಪಟ್ಟಣದ ಪ್ರಥಮ ಪ್ರಜೆಯನ್ನು ಆಹ್ವಾನಿಸಿರಲಿಲ್ಲ ಎಂದು ಆರೋಪಿಸಿರುವ ಜನಪ್ರತಿನಿಧಿಗಳು ಮುಂದೆ ನಡೆಯವ ಕಾರ್ಯಕ್ರಮಗಳಿಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸುವಂತೆ ಸಲಹೆ ನೀಡಿ ಮುಂದೆ ನಡೆಯುವ ಕಾರ್ಯಕ್ರಮಗಳ ನೇತೃತ್ವವನ್ನು ತಾಲೋಕು ಆಡಳಿತವೇ ವಹಿಸಲಿ ಎಂದಿದ್ದಾರೆ.