ಅರ್ಜುನ್ ಸರ್ಜಾಗೆ ಮಿಟೂ ರಿಲೀಫ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿದ್ದ ಮೀಟೂ ಪ್ರಕರಣದಲ್ಲಿ ಕನ್ನಡದ ಬಹುಭಾಷಾ ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್ ಸಿಕ್ಕಿದೆ.

ಬೆಂಗಳೂರು ಕಬ್ಬನ್ ಪಾರ್ಕ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಅಂಗೀಕರಿಸಿದೆ. ಅರ್ಜುನ್ ಸರ್ಜಾ ವಿರುದ್ಧ ಅಷ್ಟೆಲ್ಲಾ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಕೂಡ ಪೊಲೀಸರ ಬಿ ರಿಪೋರ್ಟ್‍ಗೆ ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ ಕೋರ್ಟ್ ಬಿ-ರಿಪೋರ್ಟ್ ನ್ನು ಅಂಗೀಕರಿಸಿದೆ.

ಅರ್ಜುನ್ ಸರ್ಜಾ 2018ರಲ್ಲಿ ನಟಿ ಶೃತಿ ಹರಿಹರನ್ ವಿರುದ್ಧ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮೀಟೂ ಕೇಸ್ ದಾಖಲಿಸಿದ್ದರು. ಆದರೆ, ಚಿತ್ರನಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ,ಯಾವುದೆ ಸೂಕ್ತ ಮಾಹಿತಿ ಸಾಕ್ಷಾಧಾರಗಳು ಸಿಗದೆ ಇದ್ದ ಕಾರಣ, ಪೊಲೀಸರು ಕೋರ್ಟ್‍ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು.