ಮೈಸೂರು, ಆಗಸ್ಟ್ 20:- ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅವರ ಗ್ರಾಮ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಗೆ ಶುಕ್ರವಾರ ಭೇಟಿ ನೀಡಿದ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅರಸು ಗದ್ದಿಗೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಡಿ. ದೇವರಾಜ ಅರಸು ಅವರು ಮಹಾನ್ ನೇತಾರರು. ನಾನೂ ಕೂಡ ಅರಸು ಅವರ ಅನುಯಾಯಿ ಆಗಿದ್ದೀನಿ. ಈ ರಾಜ್ಯಕ್ಕೆ ಅರಸು ಅವರ ಕೊಡುಗೆಯನ್ನು ನಾವೆಲ್ಲ ಸದಾಕಾಲ ಸ್ಮರಿಸಬೇಕಾಗಿದೆ ಎಂದು ಹೇಳಿದರು.
ಹುಣಸೂರು ಕಂದಾಯ ವಿಭಾಗವನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್. ವಿಶ್ವನಾಥ್ ಮತ್ತು ವಿಧಾನಸಭೆ ಸದಸ್ಯರಾದ ಹೆಚ್.ಪಿ. ಮಂಜುನಾಥ್ ಮನವಿ ಸಲ್ಲಿಸಿದ್ದಾರೆ. ಎಲ್ಲಾ ರಾಜಕೀಯ ಮುಖಂಡರು ಒಮ್ಮತಾಭ್ರಿಯದಿಂದ ಬಂದರೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದುಕೊಂಡು ಹೋಗಿ ಮಾತನಾಡುತ್ತೇನೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಹೆಚ್.ಪಿ. ಮಂಜುನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.