ಮೈಸೂರು: ನಂಜನಗೂಡು ತಾಲೂಕಿನ ಹಲವಾರು ಗ್ರಾಮಗಳಿಗೆ ನೀರು ಹರಿಸುವ ನುಗು ಏತ ನೀರಾವರಿ ಯೋಜನೆಗೆ 35 ವರ್ಷಗಳ ಬಳಿಕ 80 ಕೋಟಿ ಅನುದಾನ ಅನುಮೋದನೆ ದೊರೆತಿದೆ.
ನುಗು ಏತ ನೀರಾವರಿ ಯೋಜನೆಗೆ ಅನುದಾನ ದೊರೆಯುವಂತೆ ಮಾಡುವಲ್ಲಿ ಹೆಚ್.ಡಿ.ಕೋಟೆ ಶಾಸಕ ಬಿ.ಹರ್ಷವರ್ಧನ್ ಅವರ ಶ್ರಮವಹಿಸಿದ್ದು, ಹಣಕಾಸು ಇಲಾಖೆಯಿಂದ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದು ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆಯಲಿರುವುದಾಗಿ ತಿಳಿದು ಬಂದಿದೆ.
ಸರಗೂರು ತಾಲೂಕಿನ ಚಾಮೇಗೌಡನಹುಂಡಿ ಬಳಿ ಕಬಿನಿ ನದಿಯಿಂದ ಪಂಪ್ ಮೂಲಕ ನೀರನ್ನು ಎತ್ತಿ ರೈಸಿಂಗ್ ಮೇನ್ ಮೂಲಕ ನುಗು ನದಿಗೆ ಹರಿಸಿ ಅಣೆಕಟ್ಟು ತುಂಬಿಸುವುದೇ ನುಗು ಏತಯೋಜನೆಯಾಗಿದ್ದು, ಇದನ್ನು ಜಾರಿಗೊಳಿಸುವಂತೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಿ.ಹರ್ಷವರ್ಧನ್ ಅವರ ಎದುರು ಜನ ಬೇಡಿಕೆಯನ್ನಿಟ್ಟಿದ್ದರು.
ಶಾಸಕರಾಗಿ ಆಯ್ಕೆಯಾದ ತಕ್ಷಣವೇ ಹರ್ಷವರ್ಧನ್ ಅವರು ಈ ಯೋಜನೆಯನ್ನು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊAದಿಗೆ ಚರ್ಚಿಸಿ 2019-20ರ ಬಜೆಟ್ನಲ್ಲಿ 80 ಕೋಟಿ ರೂ. ಅನುದಾನ ದೊರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗ ಕೆಆರ್ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮೈಸೂರಿಗೆ ಬಂದಿದ್ದ ವೇಳೆ ನುಗು ಯೋಜನೆಯತ್ತ ಗಮನ ಸೆಳೆದಾಗ ಸ್ಥಳದಲ್ಲಿಯೇ ಆರ್ಥಿಕ ಮಂಜೂರಾತಿ ನೀಡಿದ್ದರು. ಬಳಿಕ ಬಜೆಟ್ ನಲ್ಲಿ ಅನುದಾನ ಘೋಷಿಸಿರುವ ಕುರಿತು ಶಾಸಕ ಹರ್ಷವರ್ಧನ್, ಯಡಿಯೂರಪ್ಪ ಅವರ ಗಮನ ಸೆಳೆಯುತ್ತಿದ್ದಂತೆ ಆರ್ಥಿಕ ಮಂಜೂರಾತಿಗೆ ಸ್ಥಳದಲ್ಲೇ ಆದೇಶ ಮಾಡಿ ಹೊರಡಿಸಿದರು.
ಈ ಯೋಜನೆಗಾಗಿ ನದಿಯಿಂದ 270 ಕ್ಯೂಸೆಕ್ಸ್ ನೀರು ಎತ್ತಲಾಗುತ್ತದೆ. 2.4 ಟಿಎಂಸಿ ನೀರಿನ ಅಗತ್ಯವಿದ್ದು 3.05 ಕಿ.ಮೀ. ಉದ್ದಕ್ಕೆ 2.5 ಮೀಟರ್ ವ್ಯಾಸದ ಎಂಎಸ್ ರೈಸಿಂಗ್ ಪೈಪ್ಲೈನ್ನಿಂದ ಡೆಲಿವರಿ ಚೇAಬರ್ 1.3 ಕಿ.ಮೀ. ನಾಲೆ ಕೊರೆದು ಇದರಿಂದ ನುಗು ನದಿಗೆ ನೀರು ಹರಿಸಿ ಅಣೆಕಟ್ಟೆಗೆ ತುಂಬಲಾಗುತ್ತದೆ. ಇದರಿಂದ ಹತ್ತು ಸಾವಿರಎಕರೆ ಪ್ರದೇಶಕ್ಕೆ ನೀರು ಲಭಿಸಲಿದೆ.
ತಾಲೂಕಿನ ಕರತಲೆ, ಮಸಗೆ, ಕಳಲೆ, ಹಂಡುವಿನಹಳ್ಳಿ, ದೇಬೂರು, ಕರಳಾಪುರ, ದೇವೀರಮ್ಮನಹಳ್ಳಿ, ಸಿಂಧುವಳ್ಳಿ, ಕಾಳಿಹುಂಡಿ, ಸಿಂಗಾರಿಪುರ, ಶ್ರೀನಗರ, ಹೆಡತಲೆ, ಗೀಕಹಳ್ಳಿ, ದೇವರಸನಹಳ್ಳಿ, ಉಪ್ಪನಹಳ್ಳಿ, ಹೊಸೂರು, ಕೋಡಿನರಸೀಪುರ, ಹೊರಳವಾಡಿ, ಮಳ್ಳೂರು, ಅಳಗಂಚಿಪುರ ಸೇರಿದಂತೆ 100ಕ್ಕೂ ಹೆಚ್ಚು ಗ್ರಾಮಗಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ. ನರಸಾಂಬುಧಿಕೆರೆ, ಕಳಲೆ ಚೆಲುವಾಂಬ ಕೆರೆಸೇರಿದಂತೆ ಎAಟು ಕೆರೆ ಕಟ್ಟೆಗಳೂ ತುಂಬುವುದರಿAದ ಹತ್ತಾರು ಗ್ರಾಮಗಳ ಅಂತರ್ಜಲ ಹೆಚ್ಚಲಿದೆ. ಜತೆಗೆ 17 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾಂಟ್ ನಿರ್ಮಾಣ ಮಾಡಿ ಎರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ಇದರಲ್ಲಿದೆ.