ರಾಷ್ಟ್ರಪ್ರೇಮ ಭಾವೈಕ್ಯತೆ ಏಕತೆಯನ್ನು ಎತ್ತಿಹಿಡಿಯುವ ಕೆಲಸವಾಗಬೇಕು:

ಮೈಸೂರು: ರಾಷ್ಟ್ರಪ್ರೇಮ, ಭಾವೈಕ್ಯತೆ, ಏಕತೆಯನ್ನು ಎತ್ತಿಹಿಡಿಯುವ ಕೆಲಸವಾಗಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೭೫ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಮಾತನಾಡಿದರು. ಇಡೀ ದೇಶ ೭೫ ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಹೊಸ ಮಾರ್ಗ ಸೂಚಿಯನ್ವಯ ಇಡೀ ವರ್ಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ 94 ವರ್ಷದ ಸಿ.ಆರ್. ರಂಗಶೆಟ್ಟಿ ಅವರು ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ವಾತಂತ್ರ್ಯಕ್ಕಾಗಿ ತಾವು ಮತ್ತು ತಮ್ಮವರು ಹೋರಾಡಿದ ಕೆಲವು ಘಟನೆಗಳನ್ನು ಮೆಲಕು ಹಾಕಿದರು.

ಕುಲಸಚಿವ ಹಾಗೂ ಹಿರಿಯ ಇತಿಹಾಸ ಪ್ರಾಧ್ಯಾಪಕ ಪ್ರೊ. ಆರ್. ರಾಜಣ್ಣ  ಭಾರತ ಸ್ವಾತಂತ್ರ್ಯ ಚಳುವಳಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಎಂ. ಮಹದೇವನ್, ಹಣಕಾಸು ಅಧಿಕಾರಿ ಡಾ. ಎ. ಖಾದರ್‌ಪಾಷ, ಡೀನ್ ಶೈಕ್ಷಣಿಕ ಪ್ರೊ. ಕಾಂಬ್ಳೆ ಅಶೋಕ್, ಡೀನ್ ಅಧ್ಯಯನ ಕೇಂದ್ರ ಡಾ. ಷಣ್ಮುಖ, ಇನ್ನಿತರ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಎನ್.ಆರ್. ಚಂದ್ರೇಗೌಡ ಸ್ವಾಗತಿಸಿದರು ಹಾಗೂ ಡಾ. ಜೆ.ಎಸ್. ಚಂದ್ರಶೇಖರ್ ವಂದಿಸಿದರು.

ಕಾರ್ಯಕ್ರಮದ ನಂತರ ಎಲ್ಲರೂ ಜಾಥ ಹಮ್ಮಿಕೊಳ್ಳಲಾಗಿತ್ತು. 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ೭೫ನೇ ಸ್ವಾತಂತ್ರ್ಯ ದಿನಾಚರಣೆಯ  ಅಜಾದಿ ಕ ಅಮೃತ ಮಹೋತ್ಸವ’ದ ಅಂಗವಾಗಿ ವರ್ಷವಿಡೀ

ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

  ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್

Leave a Reply

Your email address will not be published. Required fields are marked *