ಮೈಸೂರು, ಆಗಸ್ಟ್ 31: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 2 ಲಕ್ಷ ಬಹುಮಾನವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಪೊಲೀಸ್ ಆಯುಕ್ತಾರಾದ ಡಾ. ಚಂದ್ರಗುಪ್ತ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಮೈಸೂರಿನಲ್ಲಿ ಅಪರಾಧವೆಸೆಗಿದರೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂಬ ಸಂದೇಶವನ್ನು ನಮ್ಮ ಪೊಲೀಸರು ನೀಡಿದ್ದಾರೆ. ಇದಕ್ಕಾಗಿ ಮಂಗಳೂರಿಂದ ಬಂದಿರುವ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು ಪೊಲೀಸರಿಗೆ ಅಭಿನಂದಿಸಿ, 2 ಲಕ್ಷ ರೂ. ನಗದು ಬಹುಮಾನ ನೀಡಿದ್ದಾರೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರಾದ ವೈ.ಎನ್. ಶಂಕರೇಗೌಡ, ಆರ್. ಜಯರಾಮ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳಾದ ದೇವಿ ಪ್ರಸಾದ್ ಶೆಟ್ಟಿ, ರಾಜ್ ಪೂಜಾರಿ, ಅಶೋಕ್ ಶೆಟ್ಟಿ, ಶಶಿಕುಮಾರ್ ರೈ, ಮಹೇಶ್ ಹೆಗಡೆ, ಸದಾಶಿವ ಉಳ್ಳಾಲ್, ಜಯಪ್ರಕಾಶ್ ತುಂಬೆ, ಮೈಸೂರಿನ ಮುಖಂಡರಾದ ಎಸ್.ಎಸ್.ಮಹೇಶ್(ಕೇಬಲ್), ಇ.ಸಿ.ನಿಂಗರಾಜ್ ಗೌಡ, ಡಿಸಿಪಿ ಪ್ರದೀಪ್ ಗುಂಟಿ, ಮತ್ತಿತರರು ಉಪಸ್ಥಿತರಿದ್ದರು.