ಕರ್ನಾಟಕದಲ್ಲಿನ ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ವರದಿ ನೀಡಿದ್ದ ಎಸ್ ಟಿ ಎಸ್
ವರದಿ ಓದಿ ಮೆಚ್ಚುಗೆ ಪತ್ರ ಬರೆದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರು ಕೇಂದ್ರದ ಮಹತ್ವಾಕಾಂಕ್ಷಿ “ಸಹಕಾರದಿಂದ ಸಮೃದ್ಧಿ” (ಸಹಕಾರ್ ಸೇ ಸಮೃದ್ಧಿ) ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕರೆ
ಬೆಂಗಳೂರು: ಕರ್ನಾಟಕದಲ್ಲಿ ಸಹಕಾರ ಇಲಾಖೆಯ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್.ಟಿ.ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೇಂದ್ರ ಗೃಹಮಂತ್ರಿಗಳು ಹಾಗೂ ಸಹಕಾರ ಸಚಿವರೂ ಆದ ಅಮಿತ್ ಷಾ ಅವರು ಶ್ಲಾಘಿಸಿದ್ದಾರೆ. ಅಲ್ಲದೆ, ಜೊತೆಯಾಗಿ ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಈಚೆಗಷ್ಟೇ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ ಸಂದರ್ಭದಲ್ಲಿ ಕರ್ನಾಟಕದಲ್ಲಿನ ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ಸಹಕಾರ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್ ಅವರು ಅಮಿತ್ ಷಾ ಅವರಿಗೆ ವರದಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಸಚಿವರು, ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಸಹಕಾರದಿಂದ ಸಮೃದ್ಧಿ” (ಸಹಕಾರ್ ಸೇ ಸಮೃದ್ಧಿ) ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದು, ಇದರ ಮೂಲಕ ಎಲ್ಲ ವರ್ಗದ ಜನರನ್ನೂ ತಲುಪಬೇಕು. ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಅಲ್ಲದೆ, ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ನನಗಿದೆ. ಸಹಕಾರ ವಲಯವು ಮತ್ತಷ್ಟು ವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇರಲಿದೆ. ಸಹಕಾರ ವಲಯದ ಮೂಲಕ ಅಭಿವೃದ್ಧಿಯ ಪರ್ವ ಕಾಣಬೇಕು ಎಂಬ ನಿಮ್ಮ ಆಶಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಮಿತ್ ಷಾ ಅವರು ತಿಳಿಸಿದ್ದಾರೆ.

ಪತ್ರದ ಸಾರಾಂಶ ಹೀಗಿದೆ…
ಮಾನ್ಯ ಸೋಮಶೇಖರ್ ಅವರೇ,
ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ತಾವು ಕಳುಹಿಸಿರುವ ವರದಿಯನ್ನು ಓದಿದ್ದೇನೆ. ಅದರಲ್ಲಿ ವಿಚಾರಗಳ ಬಗ್ಗೆ ನನಗೆ ಅತೀವ ಖುಷಿಯಾಗಿದೆ. ನಿಮ್ಮ ವರದಿ ಬಗ್ಗೆ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಬಳಿಯೂ ನಾನು ಮಾತುಕತೆ ನಡೆಸಿದ್ದೇನೆ. ಮಾನ್ಯ ಪ್ರಧಾನಿಯವರ ಐತಿಹಾಸಿಕ “ಸಹಕಾರದಿಂದ ಸಮೃದ್ಧಿ” ಯೋಜನೆಯು ಎಲ್ಲ ವರ್ಗದ ಜನರಿಗೂ ತಲುಪಬೇಕು. ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಭಾರತದ ಸಹಕಾರಿ ಕ್ಷೇತ್ರದ ಮೂಲಕ ಆಗುತ್ತಿರುವ ಆರ್ಥಿಕ ಬೆಳವಣಿಗೆಯು ಉಳಿದ ದೇಶಗಳಿಗೆ ಮಾದರಿಯಾಗಿದೆ. ನಮ್ಮ ಸಹಕಾರ ಸಚಿವಾಲಯ ಸೇರಿದಂತೆ ಸಹಕಾರ ವಲಯದಲ್ಲಿ ಕೆಲಸ ಮಾಡುವ ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಜವಾಬ್ದಾರಿಯುತ ಭಾವನೆಯಿಂದ ಹಾಗೂ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಸಹಕಾರಿ ಕ್ಷೇತ್ರದ ಈ ಐತಿಹಾಸಿಕ ನಿರ್ಣಯ ಮತ್ತು ಅದಕ್ಕೆ ಸಂಬಂಧಿಸಿದ ಜನರನ್ನು ಸಶಕ್ತಗೊಳಿಸಲಿದೆ. ಅಲ್ಲದೆ, ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ನನಗಿದೆ. ಸಹಕಾರ ವಲಯವು ಮತ್ತಷ್ಟು ವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇರಲಿದೆ. ಸಹಕಾರ ವಲಯದ ಮೂಲಕ ಅಭಿವೃದ್ಧಿಯ ಪರ್ವ ಕಾಣಬೇಕು ಎಂಬ ನಿಮ್ಮ ಆಶಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
ಅಮಿತ್ ಷಾ
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರು