ಮೈಸೂರು: ಜುಲೈ 6ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಗಿಡನೆಡುವ ಅಭಿಯಾನ ನಡೆಸುವ ಮೂಲಕ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಜನ್ಮದಿನ ಮತ್ತು ಪುಣ್ಯತಿಥಿಯನ್ನು ಆಚರಿಸಲು ಬಿಜೆಪಿ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ ಅವರು, ಜೂ.23ರಿಂದಲೇ ಕಾರ್ಯಕ್ರಮ ಆರಂಭಿಸಲಾಗಿದ್ದು ಜು.6ರವರೆಗೆ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಡಾ.ಶ್ಯಾಮಪ್ರಸಾದ್ ಮುಖರ್ಜಿ ಯವರ ನೆನಪಿನಲ್ಲಿ ಅವರ ಜನ್ಮದಿನ ಜೂ.23 ರಿಂದ ಪುಣ್ಯತಿಥಿ ದಿನವಾದ ಜು.6ರವರೆಗೆ ಬೂತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುವುದಲ್ಲದೆ, ಮೈಸೂರು ನಗರದಾದ್ಯಂತ ಎಲ್ಲ ಬಡಾವಣೆಗಳಲ್ಲಿ ಸಸಿ ನೆಡುವ ಅಭಿಯಾನ, ಪ್ಲಾಸ್ಟಿಕ್ ಮುಕ್ತ ಅಭಿಯಾನ ನಡೆಯಲಿದೆ ಎಂದು ಹೇಳಿದರು.
ದೇಶದಲ್ಲಿ ಕಾಂಗ್ರೆಸ್ ಸರ್ಕಾರ 1975 ಜೂ.25ರಂದು ತುರ್ತು ಪರಿಸ್ಥಿತಿ ಹೇರುವ ಮೂಲಕ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿತ್ತು ಹೀಗಾಗಿ ಅಂದು ದೇಶಾದ್ಯಂತ ಕರಾಳ ದಿನಾಚರಣೆ ನಡೆಯಲಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮೇಂಟೇನೆ ಆ ಇಂಟರ್ನಲ್ ಸೆಕ್ಯೂರಿಟಿ ಆಕ್ಟ್ ಅಡಿಯಲ್ಲಿ ದೇಶಕ್ಕೆ ಜೈಕಾರ ಕೂಗಿದವರನ್ನು ಬಂಧಿಸಲಾಗಿತ್ತು. ಅವರಲ್ಲಿ ಎನ್.ಎಂ.ಚಂದ್ರಶೇಖರ್, ಹೋಟೆಲ್ ಮಹದೇವಣ್ಣ, ತೋಂಟದಾರ್ಯ ಸೇರಿದ್ದರು. ಆ ಮೂವರನ್ನು ಇದೇ ಸಂದರ್ಭ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಜೂ.27ರಂದು ನಡೆಯುವ ಮನ್ ಕೀ ಬಾತ್ ಕಾರ್ಯಕ್ರಮವನ್ನು ಜನರು ಆಲಿಸಲು ಬೂತ್ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಮುಂಬರುವ ದಿನಗಳಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುವ ಮುನ್ಸೂಚನೆ ಇರುವ ಕಾರಣ ಬಿಜೆಪಿ ವತಿಯಿಂದ ಮಕ್ಕಳ ಆರೋಗ್ಯದ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಸಹಾಯವಾಣಿ ಆರಂಭಿಸಲಾಗುತ್ತದೆ ಎಂದರು.
ಈ ವೇಳೆ ಬಿಜೆಪಿ ನಗರ ವಕ್ತಾರ ಮೋಹನ್, ಟಿ.ರಮೇಶ್, ಎಚ್.ಜಿ.ಗಿರಿ‘ರ್, ಸೋಮಸುಂದರ್, ಮಹೇಶ್ ರಾಜೇ ಅರಸ್, ಕೇಬಲ್ ಮಹೇಶ್ ಇದ್ದರು.