ಯಾರಾಗುತ್ತೀರಿ ರಾಜಕಾರಣಿ : ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆಗೆ ವಿದ್ಯಾರ್ಥಿಗಳ ಮೌನ…!

ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆಗೆ ವಿದ್ಯಾರ್ಥಿಗಳ ನಿರುತ್ತರ
ಮೈಸೂರು: ರಾಜಕಾರಣಿಗಳು ಯಾರಾಗುತ್ತೀರಿ ಎಂಬ ಸಚಿವ ಎಸ್.ಟಿ.ಸೋಮಶೇಖರ್ ಅವರ ಪ್ರಶ್ನೆಗೆ ವಿದ್ಯಾರ್ಥಿಗಳೆಲ್ಲರೂ ಮೌನವಹಿಸಿದ ಪ್ರಸಂಗ ನಗರದಲ್ಲಿ ನಡೆಯಿತು.


ಕೋವಿಡ್ ಹಿನ್ನೆಲೆಯಲ್ಲಿ ದೀರ್ಘಕಾಲದ ನಂತರ 9, 10ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜು ಭೌತಿಕ ತರಗತಿಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿ, ಶುಭಕೋರಿದರು.
ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸಂಯುಕ್ತ ಕಾಲೇಜಿಗೆ ಭೇಟಿ ನೀಡಿದಾಗ, ಭೌತಿಕ ತರಗತಿಗಳು ಆರಂಭವಾಗಿರುವುದು ಖುಷಿ ತಂದಿದೆ ಎಂದು ವಿದ್ಯಾರ್ಥಿನಿಯರು ಸಚಿವರಿಗೆ ಹೇಳಿದರು.

ಕುವೆಂಪುನಗರದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ, ವಿದ್ಯಾರ್ಥಿಗಳ ಶೈಕ್ಷಣಿಕ ಆಶೋತ್ತರಗಳ ಬಗ್ಗೆ ಸಚಿವರು ವಿಚಾರಿಸಿದರು. ರಾಜಕಾರಣಿ ಆಗುವ ಬಯಕೆ ಯಾರಿಗಾದರೂ ಇದಿಯ ಎಂದು ಸಚಿವರು ಕೇಳಿದಾಗ ವಿದ್ಯಾರ್ಥಿಗಳು ನಕ್ಕು ಅಸಮ್ಮತಿ ತೋರಿದರು. ಇಂಜಿನಿಯರ್, ವೈದ್ಯ, ಐ.ಎ.ಎಸ್, ಐ.ಪಿ.ಎಸ್ ಆಗುವ ಬಗ್ಗೆ ಕೇಳಿದಾಗ ಹಲವರು ಕೈ ಮೇಲೆ ಎತ್ತಿ ತಮ್ಮ ಗುರಿ ಬಯಕೆ ವ್ಯಕ್ತಪಡಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಸಚಿವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರಾಮದಾಸ್, ಸಂಸದ ಪ್ರತಾಪ್‌ಸಿಂಹ, ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *