ಹೂಟಗಳ್ಳಿ ನಗರಸಭೆ ಕಾರ್ಯಾಲಯ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಯುಕ್ತರ ವಿರುದ್ದ ಕ್ರಮಕ್ಕೆ ಡಿಸಿಗೆ ಸಂಸದ ಪ್ರತಾಪ್ ಸಿಂಹ ದೂರು

 ಮೈಸೂರುತಾಲೂಕು ಹೂಟಗಳ್ಳಿ ನಗರಸಭೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರನ್ನು ಆಹ್ವಾನಿಸದ ಶಿಷ್ಟಾಚಾರ ಉಲ್ಲಂಘಿಸಿರುವ ನಗರಸಭೆ ಆಯುಕ್ತ ನರಸಿಂಹಮೂರ್ತಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ . ಮೈಸೂರು ನಗರಕ್ಕೆ ಹೊಂದಿಕೊಂಡಂತಿರುವ ತಾಲೂಕಿನ ಅಭಿವೃದ್ಧಿ ಹೊಂದಿದ ಗ್ರಾಮ ಪಂಚಾಯಿಗಳನ್ನು ಮೆರ್ಜೆಗೇರಿಸಿ ಬೋಗಾದಿ , ಶ್ರೀರಾಂಪುರ , ಕಡಕೊಳ ಹಾಗೂ ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿ ಹಾಗೂ ಹೂಟಗಳ್ಳಿ ನಗರಸಭೆಯನ್ನು ಸರ್ಕಾರ ರಚಿಸಿದ , ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಈ ಕಾರ್ಯವಾಗಿದ್ದು ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ . ಸಂಸದನಾಗಿ ನಾನೂ ಕೂಡ ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದೆ .

ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಮೈಸೂರಿನಲ್ಲೇ ಇದ್ದರೂ ಅವರಿಗೆ ನಗರಸಭೆ ಕಾರ್ಯಾಲಯ ಉದ್ಘಾಟನೆ ಬಗ್ಗೆ ಯಾವುದೇ ಮಾಹಿತಿ ನೀಡದೆ ಶುಕ್ರವಾರ ಕಾರ್ಯಕ್ರಮ ನಡೆಸಲಾಗಿದೆ ಇದು ಶಿಷ್ಟಾಚಾರ ಉಲ್ಲಂಘನೆಗೆ ಸ್ಪಷ್ಟ ನಿದರ್ಶನವಾಗಿದ್ದು , ನಗರಸಭೆ ಆಯುಕ್ತರಾದ ನರಸಿಂಹಮೂರ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ . ಬೆಂಗಳೂರು ನಂತರ ಮೈಸೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು , ನಗರಕ್ಕೆ ಹೊಂದಿಕೊಂಡಂತಿರುವ ಆಲನಹಳ್ಳಿ , ಹಂಚ್ಯಾ , ಕಡಕೊಳ , ರಮ್ಮನಹಳ್ಳಿ , ಹೊಸಹುಂಡಿ , ದೇವಲಾಪುರ , ಶ್ರೀರಾಂಪುರ , ಜಯಪುರ , ಬೋಗಾದಿ , ಹಿನಕಲ್ , ಕೂರ್ಗಳ್ಳಿ , ಇಲವಾಲ , ಸಿದ್ದಲಿಂಗಪುರ ಗ್ರಾಪಂಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದು , ಹಲವು ಬಡಾವಣೆ , ಕೈಗಾರಿಕೋದ್ಯಮಗಳು ಸ್ಥಾಪನೆಗೊಂಡಿವೆ . ಪರಿಣಾಮ ಗ್ರಾಪಂಗಳ ಆದಾಯವೂ ಉತ್ತಮವಾಗಿದೆ . ಹಾಗಾಗಿ ಕರ್ನಾಟಕ ಪೌರಾಡಳಿತ ಕಾಯ್ದೆಯನ್ವಯ ಈ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿ ‘ ಬೃಹತ್ ಮೈಸೂರು ‘ ರಚಿಸಿ , ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಸಂಸದ ಪ್ರತಾಪ್ ಸಿಂಹ 2020 ರ ಏಪ್ರಿಲ್ 18 ರಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣನವರಿಗೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು .

Leave a Reply

Your email address will not be published. Required fields are marked *